ಹೊಸದಿಗಂತ ವರದಿ, ಮಂಗಳೂರು:
ಮಂಗಳೂರಿನ ಹೊರವಲಯ ಬಜಪೆ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ಯುವಕನ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಟಿಪಲ್ಲದ ಸುಹಾಸ್ ಗಂಭೀರ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ.
ರಾತ್ರಿ ಸಮಯ ಬಜಪೆ ಕಿನ್ನಿಪದವು ಪೆಟ್ರೋಲ್ ಪಂಪ್ ಬಳಿ ಕಾರಿನಲ್ಲಿ ಸಾಗುತ್ತಿದ್ದ ಸುಹಾಸ್ ಮತ್ತು ಸ್ನೇಹಿತ ಇದ್ದ ಕಾರನ್ನು ದುಷ್ಕರ್ಮಿಗಳು ಪಿಕಪ್ ವಾಹನದಿಂದ ಅಡ್ಡ ಹಾಕಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯ ಮೂಲಗಳು ಮಾಹಿತಿ ನೀಡಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.