ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾಮಾರು ಸಾಗಾಟದ ಲಾರಿಯೊಂದರಲ್ಲಿ ಚಲಿಸುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಲಾರಿ ಭಾಗಶಃ ಬೆಂಕಿಗಾಹುತಿಯಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಈ ಲಾರಿ,ಯಲ್ಲಿ ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿತ್ತು.
ಅಪಾಯದ ಸುಳಿವು ಸಿಗುತ್ತಿದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದು, ಈ ವೇಳೆ ಲಾರಿಗೆ ಬೆಂಕಿ ಹತ್ತಿ ಕೊಂಡಿದೆ. ತಕ್ಷಣವೇ ಧಾವಿಸಿ ಬಂದ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಲಾರಿ ಭಾಗಶಃ ಸುಟ್ಟು ಹೋಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ.