ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಮರಿಗೆ ಉರುಳಿಬಿದ್ದು ಎಂಟು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮುವಾನಿ ಪ್ರದೇಶದ ಭಂಡಾರಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ .
ವಾಹನವು ಮುವಾನಿಯಿಂದ ಜಿಲ್ಲೆಯ ಬೊಕ್ತಾಗೆ ಪ್ರಯಾಣಿಸುತ್ತಿದ್ದಾಗ ಸೋನಿ ಸೇತುವೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ.
ಅಪಘಾತದಲ್ಲಿ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೇಖಾ ಯಾದವ್ ದೃಢಪಡಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.