Saturday, October 11, 2025

SHOCKING | ಪುತ್ತೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಹೊಸದಿಗಂತ ವರದಿ, ಪುತ್ತೂರು:

ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ವಾಮನ (40) ಸಾವನ್ನಪ್ಪಿದವರು.

ಬಿಜೆಪಿಯ ಕಾರ್ಯಕರ್ತನಾಗಿದ್ದ ವಾಮನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ನಿವಾಸಿ.

ಶನಿವಾರ ಸಂಜೆ ಸುಮಾರು 5.30 ರ ವೇಳೆ ವಾಮನ ಅವರು ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.

error: Content is protected !!