ಹೊಸದಿಗಂತ ವರದಿ, ಪುತ್ತೂರು:
ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ವಾಮನ (40) ಸಾವನ್ನಪ್ಪಿದವರು.
ಬಿಜೆಪಿಯ ಕಾರ್ಯಕರ್ತನಾಗಿದ್ದ ವಾಮನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ನಿವಾಸಿ.
ಶನಿವಾರ ಸಂಜೆ ಸುಮಾರು 5.30 ರ ವೇಳೆ ವಾಮನ ಅವರು ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.