SHOCKING NEWS | ಕೊಡಗಿನಲ್ಲಿ ರಸ್ತೆಯಲ್ಲೇ ಧಗದಗಿಸಿತು ಗುಜರಿ ತುಂಬಿದ ಲಾರಿ

ಹೊಸದಿಗಂತ ವರದಿ,ಮಡಿಕೇರಿ:

ಅಗ್ನಿ ಆಕಸ್ಮಿಕದಿಂದ ಲಾರಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಗುಜರಿ ತುಂಬಿದ ಲಾರಿ ಕೊಯಮತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಾಂತ್ರಿಕ‌ ದೋಷದಿಂದ ನಿಲುಗಡೆಗೊಳಿಗೊಳಿಸಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ ಅಷ್ಟೊತ್ತಿಗಾಗಲೇ ಲಾರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!