SHOCKING NEWS | ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನ ಜಮ್ತಾರಾದಲ್ಲಿ ರೈಲು ಅಪಘಾತ ಸಂಭವಿಸಿದೆ. ಮೂಲಗಳ ಪ್ರಕಾರ ಕನಿಷ್ಠ 12 ಮಂದಿ ಸಾವು ಕಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಮ್ತಾರಾದ ಕಾಲಜಾರಿಯಾ ರೈಲು ನಿಲ್ದಾಣದಲ್ಲಿ ರೈಲು ಅನೇಕ ಪ್ರಯಾಣಿಕರ ಮೇಲೆ ಹರಿದಿದೆ. ವೈದ್ಯಕೀಯ ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ ಎಂದು ತಿಳಿಸಿದ್ದಾರೆ. ಘಟನೆ ನಡೆದ ಬೆನ್ನಲ್ಲಿಯೇ ಜಮ್ತಾರಾ ಜಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿದ್ದಾರೆ.

ಘಟನೆಗೆ ಕಾರಣವೇನು: ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನುವ ವರದಿ ಸಿಕ್ಕ ಬಳಿಕ ಎಕ್ಸ್‌ಪ್ರೆಸ್‌ ರೈಲು ನಿಂತುಕೊಂಡಿತ್ತು. ಈ ವೇಳೆ ಅಪಾಯದಿಂದ ಪಾರಾಗುವ ನಿಟ್ಟಿನಲ್ಲಿ ಹಲವು ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ. ಆದರೆ, ಅವರು ಜಿಗಿದು ಪಕ್ಕದ ರೈಲ್ವೇ ಟ್ರ್ಯಾಕ್‌ಗೆ ಹೋಗಿದ್ದರಿಂದ ಝಾಝಾ-ಅಸನ್ಸೋಲ್ ರೈಲು ಅವರ ಮೇಲೆ ಹರಿದು ಹೋಗಿದ್ದರಿಂದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!