ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕನೋರ್ವ ರಿವಾಲ್ವಾರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸೋಮವಾರಪೇಟೆಯ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.
ಗರ್ವಾಲೆ ಗ್ರಾಮದ ನಾಪಂಡ ಕುಶಾಲಪ್ಪ ಎಂಬವರ ಪುತ್ರ ರಾಜೇಶ್ ಚಂಗಪ್ಪ(೨೮) ಮೃತಪಟ್ಟವನು.
ಶನಿವಾರ ಮಧ್ಯ ರಾತ್ರಿ ಗರ್ವಾಲೆಗೆ ತೆರಳುತ್ತಿದ್ದ ಸಂದರ್ಭ ಮಾದಾಪುರ ಸಮೀಪದ ಮುವತೊಕ್ಕಲು ಗ್ರಾಮದ ರಸ್ತೆಯಲ್ಲಿ ಮೃತ ಚಾಲಿಸುತ್ತಿದ್ದ ಬೆಲೆನೊ ಕಾರು ಅಪಘಾತವಾಗಿದೆ. ಮನೆಗೆ ಕರೆ ಮಾಡಿ, ಅಪಘಾತ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.
ನಂತರ ಸ್ವಲ್ಪ ದೂರದಲ್ಲಿ ಕಾಫಿ ತೋಟದೊಳಗೆ ತೆರಳಿ ಹಣೆ ಭಾಗಕ್ಕೆ ಗುಂಡು ಹಾರಿಸಿಕೊಂಡಿದ್ದಾನೆ.
ಭಾನುವಾರ ಬೆಳಿಗ್ಗೆ ಕುಟುಂಬದವರು ಸೋಮವಾರಪೇಟೆ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಂಜೆ ಮೃತದೇಹ ಪತ್ತೆಯಾಗಿದ್ದು, ಪೊಲಿಸರು ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸ್ ತನಿಖೆಯಿಂದ ಸತ್ಯಾಂಶ ತಿಳಿಯಬೇಕಿದೆ.