ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಟಾಕಿ ಗೋಡೌನ್ ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ಘಟನೆ ನಡೆದಿದೆ.
ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ 6 ಗಂಟೆ ಸಮಯಕ್ಕೆ ಸಿಡಿಯಲು ಪ್ರಾರಂಭವಾಯಿತು.
ಪಟಾಕಿ ಸಿಡಿಯುವ ಶಬ್ದಕ್ಕೆ ದರ್ಬೆ ಸುತ್ತಮುತ್ತಲಿನ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಆ ಕಟ್ಟಡದಲ್ಲಿರುವ ಎಲ್ಲಾ ಅಂಗಡಿಯವರು ಬಂದ್ ಮಾಡಿ ಹೊರ ಬಂದಿದ್ದಾರೆ. ದರ್ಬೆಯಲ್ಲಿ ಪಟಾಕಿ ಮಾಡುವವರಿಗೆ ಸೇರಿದ ಪಟಾಕಿ ಎನ್ನಲಾಗಿದೆ.
ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ಘಟನೆ ನಡೆದಿದೆಯ ಅಥವ ಬೆಂಕಿ ಆಕಸ್ಮಿಕ ನಡೆದಿದೆಯ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕಷ್ಟೇ.
ಮುಚ್ಚಲ್ಪಟ್ಟಿದ್ದ ಅಂಗಡಿಯಂತಿರುವ ಕಾಂಪ್ಲೆಕ್ಸ್ ನ ಕಾರು ಪಾರ್ಕಿಂಗ್ ನಲ್ಲಿ ಇಷ್ಟು ಪ್ರಮಾಣದ ಪಟಾಕಿ ಶೇಖರಿಸಿ ಇಡಲು ಪರವಾನಿಗೆ ನೀಡುತ್ತಾರೆಯೇ ಎನ್ನುವ ಪ್ರಶ್ನೆಯನ್ನು ನೆರೆದಿದ್ದವರು ಕೇಳುತಿದ್ದರು.
ಪುತ್ತೂರು ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.