SHOCKING NEWS | ಗ್ರಾಮ ಪಂಚಾಯತ್ ಸದಸ್ಯ ಭೀಕರ ರಸ್ತೆ ಅಪಘಾತಕ್ಕೆ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುವಾಗ ಎರಡು ವಿದ್ಯುತ್ ಕಂಬಕ್ಕೆ ಅಪಘಾತಗೊಂಡು ತೋಟಕ್ಕೆ ಬಿದ್ದಿದೆ.

ಕೂಡಲೇ ಸ್ಥಳೀಯರು ಗಾಯಳು ಗಳನ್ನು ಆಸ್ಪತ್ರೆಗೆ ಸಾಗಿಸಿದ್ದರೆ. ಅಪಘಾತದಲ್ಲಿ ನಿಡಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿ ಕೃಷ್ಣ ಭಟ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ , ಶಶಿಕುಮಾರ್ , ನವನೀತ್ ಹಾಗೂ  ಮುರಳಿ ಮುಂಡೂರು ಎಂದು ಸ್ಥಳೀಯರು ಗುರುತಿಸಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಓರ್ವ ಘಟನೆ ನಡೆದ ಸ್ಥಳದಿಂದ ತನ್ನ ಮನೆಗೆ ಹೋಗಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!