ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.
ತಮಿಳುನಾಡು ಮೂಲದ ಕುಮಾರ್ (32) ಕೊಲೆಯಾದ ವ್ಯಕ್ತಿ.
ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಗುರು ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ ಕುಮಾರ್ (32) ಎಂಬುವವನು ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮೂವರ ನಡುವೆ ಮಾತಿಗೆ ಮಾತು ಬೆಳೆದಿರುತ್ತದೆ.
ನಂತರ ನವೀನ್ ಮತ್ತು ಕುಟ್ಟಿ ಸೇರಿ ಮರದ ಸೊಂಟೆಯಿಂದ ಕುಮಾರನ ತಲೆಗೆ ಹೊಡೆದಾಗ ಆತನು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ