SHOCKING NEWS : ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದು, ಕಾಲುವೆಯಲ್ಲಿ ಬಿದ್ದಿರುವ ಕಾರಿನಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದೆ.

ಈಗಾಗಲೇ ಕಾರನ್ನು ಮೇಲಕ್ಕೆ ಎತ್ತಿದ ಪೊಲೀಸರಿಗೆ ಕಾರಿನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿರುವುದು ತಿಳಿದು ಬಂದಿದೆ.

ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಪ್ರಕರಣ ಸಂಬಂಧ ಪೊಲಿಸರು ಪರಿಶೀಲನೆ ನಡೆಸಿದಾಗ ತುಂಗಾ ಮುಖ್ಯ ಕಾಲುವೆಯಲ್ಲಿ ಚಂದ್ರಶೇಖರ್ ಬಿಳಿ ಬಣ್ಣದ ಕಾರು ಪತ್ತೆಯಾಗಿತ್ತು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆಗೆ ಚಂದ್ರಶೇಖರ್ ಕಾರು ಬಿದ್ದಿತ್ತು. ಈ ಹಿನ್ನೆಲೆ ಪೊಲೀಸರು ಶೋಧ ಕಾರ್ಯ ನಡೆಸಿ ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಿದ್ದರು. ಕಾರಿನಲ್ಲಿ ಚಂದ್ರಶೇಖರ್ ಶವ ದೊರೆತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!