ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಕೃಷ್ಣಾಪುರ ನಾಲ್ಕನೇ ಬ್ಕಾಕ್ ನೈತ್ಯದಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಎಂದು ಗುರುತಿಸಲಾಗಿದೆ.
ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.