ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಟೀಲು ಶ್ರೀ ದೇಗುಲದ ಮುಂದೆ ಖಾಸಗಿ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು , ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿದ್ದಾರೆ.
ಸುರತ್ಕಲ್ ಸಮೀಪದ ಖಾಸಗಿ ಕಂಪೆನಿಯ ಸಿಬ್ಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿ ಗೆ ಕಟೀಲು ದೇವಸ್ಥಾನದ ಎದುರು ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.
ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಯಿತು.
ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು . ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದು ಬಾರೀ ಅನಾಹುತ ತಪ್ಪಿದೆ