SHOCKING NEWS | ಸುರತ್ಕಲ್‌ನಲ್ಲಿ ದುಷ್ಕರ್ಮಿಗಳ ದಾಳಿಗೊಳಗಾದ ಯುವಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಭಾಗದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ಮಂಗಳಪೇಟೆ ನಿವಾಸಿ ಫಾಜಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಗುರುವಾರ ರಾತ್ರಿ ಸುರತ್ಕಲ್ ಸಮೀಪದಲ್ಲಿ ಕಾರ್ಯಚರಿಸುವ ಎಸ್.ಕೆ ಮೊಬೈಲ್ ಸಮೀಪದಲ್ಲಿ ಫಾಜಿಲ್ ಮೇಲೆ ಕಾರಿನಲ್ಲಿ ಬಂದ ಮೂರು ಮಂದಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ದಾಳಿಯಿಂದ ಗಂಭೀರ ಸ್ಥಿತಿಯಲ್ಲಿ ಫಾಝಿಲ್‌ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಫಾಝಿಲ್ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!