SHOCKING | ವಿಮಾನ ತುರ್ತು ಭೂ ಸ್ಪರ್ಶ: ಕೊಚ್ಚಿ ಏರ್ ಪೋರ್ಟ್ ನಲ್ಲಿ ‘ಎಮರ್ಜೆನ್ಸಿ’ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಚ್ಚಿ ವಿಮಾನ ನಿಲ್ದಾಣಕ್ಕೆ ಶಾರ್ಜಾದಿಂದ ಆಗಮಿಸಿದ ವಿಮಾನದಿಂದ ಹೈಡ್ರಾಲಿಕ್ ವೈಫಲ್ಯ ಕಂಡ ಹಿನ್ನೆಲೆ ಸಂಪೂರ್ಣ ತುರ್ತುಸ್ಥಿತಿಯನ್ನು ಘೋಷಿಸಲಾಗಿದೆ.
ಈ ಬಗ್ಗೆ ಸಿಐಎಎಲ್ ಮಾಹಿತಿ ಬಿಡುಗಡೆ ಮಾಡಿದ್ದು, ಶಾರ್ಜಾದಿಂದ ಬರುತ್ತಿದ್ದ ವಿಮಾನದ ಹೈಡ್ರಾಲಿಕ್ ವೈಫಲ್ಯದ ಕಾರಣದಿಂದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶಕ್ಕೆ ಅವಕಾಶ ನೀಡಲಾಗಿತ್ತು. ಅಲ್ಲದೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣವಾಗಿ ತುರ್ತುಸ್ಥಿತಿಯನ್ನು ಘೋಷಿಸಲಾಗಿತ್ತು. ಇದೀಗ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂಬುದಾಗಿ ಹೇಳಿದೆ.
ದೇಶದಲ್ಲಿ ವಿಮಾನಗಳ ಅವಘಡ ಮುಂದುವರೆದಿದೆ. ಈ ಹಿಂದೆ ಸ್ಪೈಸ್ ಜೆಟ್ ಸೇರಿದಂತೆ ಹಲವು ವಿಮಾನಗಳು ತಾಂತ್ರಿಕ ದೋಷದ ಕಾರಣದಿಂದಾಗಿ ತುರ್ತು ಭೂ ಸ್ಪರ್ಶ  ಮಾಡಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!