‌SHOCKING | ನೇತ್ರಾವತಿಯಲ್ಲಿ ದಿಢೀರ್ ನೀರಿನಮಟ್ಟ ಏರಿಕೆ: ಆತಂಕದಲ್ಲಿ ತೀರವಾಸಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿಯಲ್ಲಿ ಸೋಮವಾರ ರಾತ್ರಿ ನೀರಿನಮಟ್ಟ ದಿಢೀರ್ ಏರಿಕೆ ಕಂಡಿದೆ.
ಕರಾವಳಿ ಭಾಗದಲ್ಲಿ ಮಳೆ ತುಸು ಇಳಿಮುಖವಾಗಿದ್ದರೂ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು ನದಿಯಲ್ಲಿ ನೀರಿನ ಮಟ್ಟ ಹೆಚ್ಚಲು ಕಾರಣವಾಗಿದೆ.
ಈ ಹೊಸ ಬೆಳವಣಿಗೆಯ ಹಿನ್ನೆಲೆಯಲ್ಲಿ ತೀರ ಪ್ರದೇಶದ ಜನತೆ ಮತ್ತೆ ಆತಂಕಕ್ಕೆ ಒಳಗಾಗಿದ್ದು, ಉಪ್ಪಿನಂಗಡಿ, ಬಂಟ್ವಾಳ ಭಾಗದಲ್ಲಿ ಮತ್ತೆ ನೆರೆ ಭೀತಿ ಕಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿಕ ಅಗತ್ಯ ಕ್ರಮ ಕೈಗೊಂಡಿದ್ದು, ಎಲ್ಲೂ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!