SHOCKING | ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ನೀರುಪಾಲು

ಹೊಸದಿಗಂತ ವರದಿ,ಮಂಡ್ಯ :

ಕಾವೇರಿ ನದಿ ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತಪಟ್ಟಿದ್ದರೆ, ನಾಲೆಯಲ್ಲಿ ಈಜಲು ಹೋಗಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಮೈಸೂರಿನ ಧನರಾಜ್ (21) ಹಾಗೂ ಪ್ರಸನ್ನ (33) ಎಂಬುವರೇ ಮೃತಪಟ್ಟ ಯುವಕರಾದರೆ, ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಬಾಲು (16) ಎಂಬಾತ ಸಾವನಪ್ಪಿರುವ ಬಾಲಕ.
ಶ್ರೀರಂಗಪಟ್ಟಣ ತಾಲೂಕು ಪ್ರವಾಸೀ ತಾಣವಾದ ಬಲಮುರಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಧನರಾಜ್ ಮತ್ತು ಪ್ರಸನ್ನ ಮೃತಪಟ್ಟಿದ್ದಾರೆ.
ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಬಳಿ ರಾಜಪರಮೇಶ್ವರಿ ಕಾಲುವೆಯಲ್ಲಿ ಈಜೇಲು ಹೋದ ಬಾಲು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ನುರಿತ ಈಜುಗಾರರ ಸಹಾಯದಿಂದ ಶವಗಳನ್ನು ಮೇಲೆತ್ತಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ಕೆ.ಆರ್.ಎಸ್. ಹಾಗೂ ಅರಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!