SHOCKING | ದಕ್ಷಿಣ ಕೊಡಗಿನಲ್ಲಿ ಹುಲಿ‌ ಹಾವಳಿ: ಎರಡು‌ ದಿನದಲ್ಲಿ ನಾಲ್ಕು ಜಾನುವಾರು ಬಲಿ

ಹೊಸದಿಗಂತ ವರದಿ,ಮಡಿಕೇರಿ:

ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ಮತ್ತೆ ಮಿತಿ ಮೀರಿದ್ದು, ಕಳೆದ ಎರಡು ದಿನಗಳಲ್ಲಿ ನಾಲ್ಕು ಜಾನುವಾರುಗಳನ್ನು ಕೊಂದು ಹಾಕಿದೆ.
ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿ ಮಂಗಳವಾರ ಹುಲಿ ದಾಳಿ ಮಾಡಿದ್ದು, ಪಿ.ಲವ ಎಂಬವರಿಗೆ ಸೇರಿದ ಹಸುವನ್ನು ಬಲಿ ಪಡೆದಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿರಂತರ ದಾಳಿ ಮಾಡುತ್ತಿರುವ ಹುಲಿ ಜಾಡನ್ನು ಪತ್ತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸೋಮವಾರವಷ್ಟೇ ಬಿಟ್ಟಂಗಾಲ ಸಮೀಪ 2 ನೇ ರುದ್ರಗುಪ್ಪೆ ಗ್ರಾಮದಲ್ಲಿ ಎ.ಧನು ಎಂಬವವರಿಗೆ ಸೇರಿದ ಮೂರು ಕರುಗಳನ್ನು ಹುಲಿ ಕೊಂದು ಹಾಕಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!