SHOCKING | ಕೊಡಗಿನ ಕೆಲವೆಡೆ ಕಂಪನ ಅನುಭವ: ನಗರ ಸಹಿತ ಎಲ್ಲೆಡೆ ಆತಂಕದಲ್ಲಿ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಡಿಕೇರಿ ತಾಲೂಕಿನ ಹಲವೆಡೆ ಬುಧವಾರ ಭೂಮಿ ಕಂಪಿಸಿರುವ ಅನುಭವವಾಗಿದೆ.

ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗ, ಎರಡನೇ ಮೊಣ್ಣಂಗೇರಿ,ಮದೆ, ಬೆಟ್ಟತ್ತೂರು ಗ್ರಾಮಗಳಲ್ಲಿ ಬುಧವಾರ ಪೂರ್ವಾಹ್ನ 10.50ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಆದರೆ ಈ ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಬಾರಿ (2018ರಲ್ಲಿ) ಯೂ ಈ ಭಾಗಗಳಲ್ಲಿ ಕಂಪನದ ಅನುಭವ ಆಗಿತ್ತು. ಅದಾದ ಕೆಲವೇ ತಿಂಗಳಲ್ಲಿ ಮಳೆಗಾಲ ಆರಂಭವಾಗಿ ಅಲ್ಲಲ್ಲಿ ಭೂ ಕುಸಿತ ಹಾಗೂ ಜಲಪ್ರಳಯ ಉಂಟಾಗಿತ್ತು. ಇದರಿಂದಾಗಿ ಈ ಭಾಗದ ಜನರಲ್ಲಿ ಇದೀಗ ಆತಂಕ ಸೃಷ್ಟಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!