SHOCKING | ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ನೀನಾಸಂ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರದ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಸಾಕಷ್ಟು ಧಾರಾವಾಹಿಗಳಿಗೆ ವಿನೋದ್ ದೊಂಡಾಲೆ ನಿರ್ದೇಶನ ಮಾಡಿದ್ದರು.

ಇತ್ತ ಕಿರುತೆರೆಯಿಂದ ಸಿನಿಮಾ ರಂಗಕ್ಕೂ ಎಂಟ್ರಿ ಕೊಟ್ಟಿದ್ದ ಇವರು ಸದ್ಯ ನೀನಾಸಂ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದರು. ಈಗಾಗಲೇ ಸಿನಿಮಾ ಶೇಕಡಾ 90ರಷ್ಟು ಚಿತ್ರೀಕರಣ ಮುಗಿಸಿದೆ. ಮುಂದಿನ ಹಂತದ ಚಿತ್ರೀಕರಣಕ್ಕೂ ವಿನೋದ್ ಸಿದ್ಧತೆ ಮಾಡಿಕೊಂಡಿದ್ದರು. ನಿನ್ನೆಯಷ್ಟೇ ಶೂಟಿಂಗ್ ಕುರಿತಂತೆ ನೀನಾಸಂ ಸತೀಶ್ ಜೊತೆ ಚರ್ಚೆ ಮಾಡಿದ್ದರು.

ಇಂದು ನಗರಬಾವಿಯಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!