ಹೊಸದಿಗಂತ ವರದಿ,ವಿಜಯಪುರ:
ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಜೈನಾಪೂರ ಗ್ರಾಮದ ರಾಕೇಶ ಅಂಗಡಿ (23) ಹಾಗೂ ಸಾವಿತ್ರಿ ಅಂಬಲಿ (19) ಮೃತ ಪ್ರೇಮಿಗಳು.
ರಾಕೇಶ ಮತ್ತು ಸಾವಿತ್ರಿ ಇಬ್ಬರೂ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಮನೆಯಿಂದ ಹೊರ ಹೋಗಿದ್ದರು. ಜೈನಾಪೂರ ಗ್ರಾಮದ ಹೊರವಲಯ ತೊಟವೊಂದರಲ್ಲಿ ಗಿಡಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾರೆ.
ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.