ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅಪಾರ್ಟ್ಮೆಂಟ್ನ ಬೇಸ್ಮೆಂಟ್ನಲ್ಲಿ ಮೋಟಾರ್ನಿಂದ ಮಳೆಯ ನೀರು ಮಾಡಲು ಹೋಗಿ ಎಲೆಕ್ಟ್ರಿಕ್ ಶಾಕ್ ತಗುಲಿ 9 ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆನಡೆದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಮಹಾ ಮಳೆಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ ಮನಮೋಹನ್ ಕಾಮತ್ (63), ದಿನೇಶ್ (12) ಮೃತ ದುರ್ದೈವಿಗಳು. ಇವರು ಬಿಟಿಎಂ 2ನೇ ಹಂತದಲ್ಲಿರುವ ಎನ್.ಎಸ್ ಪಾಳ್ಯದಲ್ಲಿರುವ ಮಧುವನ ಅಪಾರ್ಟ್ಮೆಂರ್ಟ್ಮೆಂಟ್ ನಿವಾಸಿಗಳು.
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ನೀರು ನಿಂತಿದ್ದು, ಜನರಿಗೆ ಮನೆಯಿಂದ ಹೊರಗಡೆ ಕಾಲಿಡಲು ಸಹ ಆಗುತ್ತಿಲ್ಲ. ಇದರ ನಡುವೆ ಇಂದು ಸಂಜೆ 6:15 ಗಂಟೆ ಸುಮಾರಿಗೆ ಅಪಾರ್ಟ್ಮೆಂಟ್ನ ಬೇಸ್ಮೆಂಟ್ನಲ್ಲಿ ನಿಂತಿದ್ದ ನೀರನ್ನು ಮೋಟಾರ್ ಮೂಲಕ ಹೊರಹಾಕಲು ಮುಂದಾಗಿದ್ದರು. ಹೊರಗಡೆಯಿಂದ ಮೋಟಾರ್ ತಂದು ಸ್ವಿಚ್ಗೆ ಕನೆಕ್ಷನ್ ನೀಡಿ ನೀರನ್ನು ಹೊರ ತೆಗೆಯುವಾಗ ಶಾರ್ಟ್ ಸರ್ಕ್ಯೂಟ್ನಿಂದ ಕರೆಂಟ್ ತಗುಲಿ ಮನಮೋಹನ್ ಕಾಮತ್ ಮೃತಪಟ್ಟಿದ್ದಾರೆ.
ಇದಕ್ಕೂ ಮುನ್ನ ವೈಟ್ ಫೀಲ್ಡ್ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋಗಿದ್ದ ಶಶಿಕಲಾ (35) ಎಂಬ ಮಹಿಳೆ ಕಾಂಪೌಂಡ್ ಕುಸಿದು ಸಾವನ್ನಪ್ಪಿದ್ದರು.