ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರು ಅಪಘಾತ ಕ್ಕೀಡಾಗಿದೆ. ಮಮತಾ ತಲೆಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.
ಇಂದು ಬೆಳಗ್ಗೆ ಇಂಡಿಯಾ ಒಕ್ಕೂಟ ಮೈತ್ರಿ ಮುರಿದುಕೊಂಡು ಏಕಾಂಗಿ ಹೋರಾಟದ ಘೋಷಣೆಯನ್ನು ಟಿಎಂಸಿ ಮುಖ್ಯಸ್ಥೆ ಘೋಷಿಸಿದ್ದಾರೆ.ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಈ ಘೋಷಣೆ ಬಳಿ ಕೋಲ್ಕತಾಗೆ ತೆರಳುತ್ತಿದ್ದ ಮಮತಾ ಬ್ಯಾನರ್ಜಿ ಕಾರು ಅಪಘಾತ ಕ್ಕೀಡಾಗಿದೆ. ಮಮತಾ ತಲೆಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.
ಅದೃಷ್ಠವಶಾತ ಅಪಘಾತದ ಪ್ರಮಾಣ ಸಣ್ಣಮಟ್ಟದಲ್ಲಿ ನಡೆದಿದೆ. ಹೀಗಾಗಿ ಮಮತಾ ಬ್ಯಾನರ್ಜಿ ಅಪಾಯದಿಂದ ಪಾರಾಗಿದ್ದಾರೆ. ತಲೆಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.