SHOCKING | ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ KSRTC ಬಸ್ ಹರಿದು ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ಕೆಎಸ್​ಆರ್​ಟಿಸಿ ಬಸ್ (KSRTC bus) ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಲತಾ ಮೃತ ಮಹಿಳೆ. ಕೆಎಸ್​ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್​ನಲ್ಲಿ ಬಟ್ಟೆ ಅಂಗಡಿಗೆ ಶಾಪಿಂಗ್​ಗಾಗಿ ತೆರಳುತ್ತಿದ್ದರು. ಮತ್ತೊಂದು ಬೈಕ್​ನಲ್ಲಿ ಪುತ್ರಿ ಕೂಡ ತೆರಳುತ್ತಿದ್ದರು. ಈ ವೇಳೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಸ್ ಬಂದಿದ್ದು, ಬಸ್​​ ಹಿಂಬದಿ ದ್ವಿಚಕ್ರ ವಾಹನಕ್ಕೆ ಟಚ್ ಆಗಿ ಇಬ್ಬರು ರಸ್ತೆಗೆ ಬಿದ್ದಿದ್ದಾರೆ.ಮಹಿಳೆ ಮೇಲೆ ಬಸ್​​ ಹರಿದಿದೆ.

ಸದ್ಯ ಲತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!