ಟೀ ದುಡ್ಡು ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ: ಕಿಡಿಗೇಡಿಗಳಿಂದ ಅಂಗಡಿ ಧ್ವಂಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದಲ್ಲಿ ಟೀ ಕುಡಿದ ಬಳಿಕ ಅಂಗಡಿ ಮಾಲೀಕ ದುಡ್ಡು ಕೇಳಿದಕ್ಕೆ ದುಷ್ಕರ್ಮಿಗಳು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಯುವಕರ ಗುಂಪು ಟೀ ಕುಡಿಯಲು ಅಂಗಡಿಗೆ ಹೋಗಿದ್ದರು. ಟೀ ಕುಡಿದು ಬಿಲ್ ಕೊಡಲು ಮುಂದಾದರು. ಈ ವೇಳೆ ಅಂಗಡಿ ಮಾಲೀಕ ಒಂದು ಕಪ್ ಚಹಾಕ್ಕೆ 45 ರೂಪಾಯಿ ಎಂದು ಹೇಳಿದರು. ಇದರಿಂದ ಕೋಪಗೊಂಡ ಯುವಕ ಅಂಗಡಿಯ ಮಾಲೀಕನಿಗೆ ಥಳಿಸಿ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳನ್ನು ಧ್ವಂಸಗೊಳಿಸಿದ್ದಾನೆ.

ಇನ್ನು ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಇಟ್ಟುಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!