ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಬೆಂಗಳೂರು ಅಭಿವೃದ್ಧಿ ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.
ಸಭೆ ಬಳಿಕ ಡಿಕೆ ಶಿವಕುಮಾರ್ ಸುದ್ದಿಗೋಷ್ಟಿ ನಡೆಸಿ, ಇಡೀ ಬೆಂಗಳೂರಲ್ಲಿ ಫುಟ್ಪಾತ್ ವ್ಯಾಪಾರವನ್ನು ನಿಲ್ಲಿಸುತ್ತೇವೆ. ನಾವು ಹೇಳಿದ ಜಾಗದಲ್ಲಿ ಮಾತ್ರವೇ ವ್ಯಾಪಾರ ಮಾಡಬೇಕು. 3755 ಜನರು ತಳ್ಳುವ ಗಾಡಿ ಕೇಳಿದ್ದಾರೆ. ಕಾನೂನಿನಲ್ಲಿ ಪುಟ್ಪಾತ್ನಲ್ಲಿ ಅಂಗಡಿ ಹಾಕುವಂತಿಲ್ಲ. ಹೀಗಾಗಿ ಪ್ಲಾನ್ ಆಫ್ ಆ್ಯಕ್ಸನ್ ಅಂಗಡಿ ಹಾಕಲು ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.
ಅದೇ ರೀತಿ ಟೌನ್ಪ್ಲಾನ್ನಲ್ಲಿ ಬೇಸ್ಮೆಂಟ್ ಮಾಡುವಂತಿಲ್ಲ. ಈಗಾಗಲೇ ಬಹಳಷ್ಟು ಕಡೆ ಪಾರ್ಕಿಂಗ್ಗಾಗಿ ಬೇಸ್ಮೆಂಟ್ ಮಾಡಿದ್ದಾರೆ ಎಂದು ಹೇಳಿದರು.
ಬೆಂಗಳೂರು ನಗರದ ಆಸ್ತಿಗಳಿಗೆ ಇ-ಖಾತಾ ಮಾಡಲು ಹೇಳಿದ್ದೇನೆ. ಡಿಜಿಟಲಿಕರಣ ಮೂಲಕ ದಾಖಲೆ ನೀಡಲು ಮುಂದಾಗಿದ್ದೇವೆ. ಇ-ಖಾತೆಯಲ್ಲಿ ಬೆಂಗಳೂರಿನ ಜನರಿಗೆ ಆಸ್ತಿಗಳ ದಾಖಲೆಯನ್ನು ಒದಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮನೆಯಲ್ಲಿ ನೀರು ನುಗ್ಗಿದರೆ ಪರಿಹಾರ ನೀಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸುವಂತಿಲ್ಲ. ಆ ವಾಹನಗಳನ್ನು ಟ್ರಾಫಿಕ್ ಪೊಲೀಸರು ತೆಗೆದುಕೊಂಡು ಹಾಕ್ತಾರೆ. ಆಕಸ್ಮಾತ್ ವಾಹನಗಳನ್ನು ಮಾಲೀಕರು ತೆಗೆದುಕೊಂಡು ಹೋಗದೇ ಇದ್ದರೆ 21 ದಿನಗಳಲ್ಲಿ ಹರಾಜು ಹಾಕ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ. .