ನೂಪುರ್ ಶರ್ಮಾ ಅರ್ಜಿ ವಜಾ: ಸುಪ್ರೀಂ ನಡೆ ಸ್ವಾಗತಿಸಿದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾದಿ ಕರಿತಾದ ನೂಪುರ್ ಶರ್ಮಾ ಹೇಳಿಕೆ ಸಂಬಂಧಿಸಿ ಸುಪ್ರೀಂ ಕೋಟ್೯ ನಡೆಯನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ನ್ಯಾಯಪೀಠ ನೀಡಿರುವ ತೀರ್ಪನ್ನು ನಿರ್ಣಾಯಕವಾದವುಗಳೆಂದು ಹೇಳಿದೆ.

ಪಕ್ಷದ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ತಮ್ಮ ರಾಜಕೀಯ ಲಾಭಕ್ಕಾಗಿ ರಾಷ್ಟ್ರವನ್ನು ಗೊಂದಲದಲ್ಲಿ ಮುಳುಗಿಸುವ ಹುನ್ನಾರದ ವಿರುದ್ದ ರಾಷ್ಟ್ರೀಯ ಕಾಂಗ್ರೆಸ್ ತನ್ನ ಹೋರಾಟ ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ನೂಪುರ್ ಅರ್ಜಿ ಸಂಬಂಧಿಸಿ ಸುಪ್ರೀಂ ಕೋರ್ಟ್‌ನ ಹೇಳಿಕೆ ಬಿಜೆಪಿ ಸರ್ಕಾರಕ್ಕೆ ಮುಖಭಂಗ ಉಂಟುಮಾಡಿದೆ. ಈ ಬೆಳವಣಿಗೆ ಬಗ್ಗೆ ಬಿಜೆಪಿ ಅಧ್ಯಕ್ಷರು, ಕೇಂದ್ರ ಗೃಹ ಸಚಿವರು, ಪ್ರಧಾನಿ ಪಕ್ಷ ಕೋಮುದ್ವೇಷ ಬಿತ್ತಿದ್ದಕ್ಕಾಗಿ ರಾಷ್ಟ್ರದ ಕ್ಷಮೆಯಾಚಿಸಲು ಸಿದ್ದರೇ ಎಂದು  ಪ್ರಶ್ನಿಸಿದ್ದಾರೆ.

ಪ್ರವಾದಿ ಕುರಿತಾಗಿ ತಾವು ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ದೇಶ ವಿವಿಧ ಭಾಗಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ನೂಪುರ್‌ ಶರ್ಮಾ ಅರ್ಜಿ ಸಲ್ಲಿಸಿದ್ದರು.
ಇದನ್ನು ನ್ಯಾಯಾಲಯ ತಿರಸ್ಕರಿಸಿತ್ತಲ್ಲದೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!