ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರೇ, ಬೆಂಗಳೂರಿನ ಹೃದಯ ಭಾಗದಲ್ಲಿರುವ ಜಾನುವಾರು ಕ್ಷೇತ್ರದಲ್ಲಿ ಎರಡು ಎಕರೆ ಬೆಲೆಬಾಳುವ ಭೂಮಿಯನ್ನು ಮುಸ್ಲಿಮರಿಗೆ ಕೊಡುತ್ತೀರಾ? ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, ಹಸುಗಳಿಗೆ ಚಿಕಿತ್ಸೆ ನೀಡುವ ಮತ್ತು ವೈದ್ಯಕೀಯ ನೆರವು ನೀಡುವ ಸರ್ಕಾರಿ ಪಶುವೈದ್ಯಕೀಯ ಆಸ್ಪತ್ರೆಗಳನ್ನು ಏಕೆ ಮುಚ್ಚಿಸಿ ಮುಸ್ಲಿಮರಿಗೆ ನೀಡುವ ಅವಶ್ಯಕೆತೆ ಏನಿತ್ತು? ಚಿಕಿತ್ಸಾಲಯವನ್ನು ಕೇವಲ ಜಾನುವಾರುಗಳಿಗೆ ನಿರ್ಮಿಸಲಾಗಿಲ್ಲ. ಇತರ ಪ್ರಾಣಿಗಳಿಗೆ ಚಿಕಿತ್ಸೆ ನೀಡಲು ಇದನ್ನು ಸ್ಥಾಪಿಸಲಾಗಿತ್ತು. ನಗರ ಕೇಂದ್ರದಲ್ಲಿ ೫೦೦ ಕೋಟಿಗಿಂತ ಹೆಚ್ಚು ಮೌಲ್ಯದ ಭೂಮಿಯನ್ನು ಹಸ್ತಾಂತರಿಸಲು ನಾವು ಅನುಮತಿಸುವುದಿಲ್ಲ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಲ್ಯಾಂಡ್ ಜಿಹಾದ್ ಎಂದು ಕರೆಯಬಹುದೇ? ಎಂದು ಪೋಸ್ಟ್ ಬರೆಯುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಕೌಂಟರ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್
ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ @siddaramaiah ನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ?
ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನ… pic.twitter.com/r8G4sph0Qa
— R. Ashoka (ಆರ್. ಅಶೋಕ) (@RAshokaBJP) February 29, 2024