ಟಿಕೆಟ್‌ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ: ಶಶಿಧರ ಯಲಿಗಾರಗೆ ಟಿಕೆಟ್‌ ನೀಡುವಂತೆ ಸಿದ್ದರಾಮಯ್ಯಗೆ ಒತ್ತಾಯ

ಹೊಸದಿಗಂತ ವರದಿ ಹುಬ್ಬಳ್ಳಿ:

ನಗರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಿವಿಧ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಭೇಟಿ ಮಾಡಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

ಶಿಗ್ಗಾಂಗ, ನವಲಗುಂದ, ಹು-ಧಾ ಪೂರ್ವ ವಿಧಾನ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ದಂಡ ಆಗಮಿಸಿ ತಮ್ಮ ನೆಚ್ಚಿನ‌ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಶಿಗ್ಗಾಂವ ಕ್ಷೇತ್ರದ ಕಾರ್ಯಕರ್ತರು ಶಶಿಧರ ಯಲಿಗಾರ ಅವರು ಒಬ್ಬ ಉತ್ತಮ ನಾಯಕರಾಗಿದ್ದಾರೆ. ಅವರಿಗೆ ಪಕ್ಷವೇನಾದರೂ ಟಿಕೆಟ್ ನೀಡದಿದ್ದರೆ ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದು ಹೇಳಿದರು. ಇನ್ನೂ ಹು-ಧಾ ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರ ನೇತೃತ್ವದಲ್ಲಿ ಜೆಡಿಎಸ್ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರುತ್ತಿದ್ದಾರೆ.

ಮಾಜಿ ಸಚಿವ ಜಮೀರ ಅಹ್ಮದ, ಶಾಸಕ ಪ್ರಸಾದ ಅಬ್ಬಯ್ಯ, ಶಾಸಕಿ ಕುಸಮಾವತಿ ಶಿವಳ್ಳಿ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!