ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರದ್ಧಾ ಕೊಲೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಪೂನಾವಾಲಾಗೆ ದೆಹಲಿಯ ಸಾಕೇತ್ ಕೋರ್ಟ್ ನ್ಯಾಯಾಂಗ ಬಂಧನವನ್ನು 4 ದಿನಗಳವರೆಗೆ ವಿಸ್ತರಿಸಿದೆ.
ಅದೇ ರೀತಿ ಜನವರಿ 10ರಂದು ಅವರನ್ನು ಭೌತಿಕವಾಗಿ ಹಾಜರುಪಡಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಮೇ 18 ರಂದು ದೆಹಲಿಯ ಮೆಹ್ರೋಲಿಯಲ್ಲಿ ಶ್ರದ್ಧಾ ವಾಕರ್ (26) ಅನ್ನು ಆಕೆಯ ಗೆಳೆಯ ಅಫ್ತಾಬ್ ಹತ್ಯೆ ಮಾಡಿದ್ದ, ಹತ್ಯೆಯ ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ತಂದೆ ನಾಪತ್ತೆ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಲಾಗಿದೆ.