ಶ್ರದ್ಧಾ ಹತ್ಯೆ ಪ್ರಕರಣ: 5 ದಿನದೊಳಗೆ ಅಫ್ತಾಬ್ ಮಂಪರು ಪರೀಕ್ಷೆ ನಡೆಸಲು ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಶ್ರದ್ಧಾ ಹತ್ಯೆ ಆರೋಪಿಗೆ ಅಫ್ತಾಬ್ ಮಂಪರು ಪರೀಕ್ಷೆಯನ್ನು ಐದು ದಿನಗಳೊಳಗೆ ಮುಗಿಸುವಂತೆ ದೆಹಲಿ ನ್ಯಾಯಾಲಯವು ಶುಕ್ರವಾರ ಆದೇಶಿಸಿದೆ. ಇದರ ಜೊತೆಗೆ ನಗರ ಪೊಲೀಸರಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಜಯಶ್ರೀ ರಾಥೋಡ್ ಅವರು ರೋಹಿಣಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಐದು ದಿನಗಳೊಳಗೆ ಆರೋಪಿಯ ಮಂಪರು ಪರೀಕ್ಷೆಯನ್ನು ನಡೆಸಲು ತನಿಖಾಧಿಕಾರಿಗೆ (ಐಒ) ಅವಕಾಶ ನೀಡುವಂತೆ ಆದೇಶಿಸಿದ್ದಾರೆ.

ಅಫ್ತಾಬ್ ತನ್ನ ಜೀವನ ಸಂಗಾತಿ ಶ್ರದ್ಧಾಳನ್ನು ಕೊಲೆ ಮಾಡಿ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಮಾಡಿ ನಗರದಾದ್ಯಂತ ಎಸೆದಿದ್ದನು. ಪ್ರಕರಣವು ಕೊಲೆಯಾದ 6 ತಿಂಗಳ ಬಳಿಕ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!