ತವರೂರು ಲಕ್ನೋದಲ್ಲಿ ಶುಭಾಂಶು ಶುಕ್ಲಾಗೆ ಭರ್ಜರಿ ಸ್ವಾಗತ: 63,000 ವಿದ್ಯಾರ್ಥಿಗಳಿಂದ ವಿಜಯಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ.

ಬೆಳಿಗ್ಗೆ ಲಕ್ನೋ ವಿಮಾನ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ಕಲಿತ ಹಳೆಯ ಶಾಲೆ ಸಿಟಿ ಮಾಂಟೆಸ್ಸರಿಯ ವಿದ್ಯಾರ್ಥಿಗಳು ಅವರನ್ನು ಸ್ವಾಗತಿಸಿದರು. ಇದೇ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬ್ರಜೇಶ್ ಪಾಠಕ್ ಗೌರಪೂರ್ವಕವಾಗಿ ಸ್ವಾಗತಿಸಿದರು.

ಬಳಿಕ ಸಿಟಿ ಮಾಂಟೆಸ್ಸರಿ ಶಾಲೆಯ 63,000 ವಿದ್ಯಾರ್ಥಿಗಳು ವಿಮಾನ ನಿಲ್ದಾಣದಿಂದ ಜಿ20 ಚೌಕ್‌ವರೆಗೆ ವಿಜಯಯಾತ್ರೆ ನಡೆಸಿದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಯುಪಿ ಡಿಸಿಎಂ ಪಾಠಕ್ ಮಾತನಾಡಿ, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ನಮ್ಮೂರಿನ ಹೆಮ್ಮೆಯ ಪುತ್ರನನ್ನು ಸ್ವಾಗತಿಸಲು ನಮಗೆ ನಿಜಕ್ಕೂ ತುಂಬಾ ಹೆಮ್ಮೆ ಎನಿಸುತ್ತದೆ. ಶುಭಾಂಶು ಶುಕ್ಲಾ ಇಡೀ ಜಗತ್ತಿಗೆ ಹೊಸ ಮಾರ್ಗವನ್ನು ತೋರಿಸಿದ್ದಾರೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!