ಎಸ್‌ಐ ನೇಮಕಾತಿ ಪ್ರಕರಣ: ಎಡಿಜಿಪಿ ಅಮೃತ್‌ ಪಾಲ್‌’ಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಸ್‌ಐ ನೇಮಕಾತಿ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ಎಡಿಜಿಪಿ ಅಮೃತ್‌ ಪಾಲ್‌ ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ನ್ಯಾಯಾಲಯ ಆದೇಶ ನೀಡಿದೆ.
ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಎಡಿಜಿಪಿ ಅಮೃತ್‌ ಪಾಲ್‌ 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಜುಲೈ 4ರಂದು ಪಿಎಸ್‌ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ನೇಮಕಾತಿ ವಿಭಾಗದ ಡಿಜಿಪಿ ಆಗಿದ್ದ ಅಮೃತ್‌ ಪಾಲ್‌ರನ್ನ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಕೋರ್ಟ್‌ಗೆ ಹಾಜರು ಪಡೆಸಲಾಗಿತ್ತು. ಸದ್ಯ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ನ್ಯಾಯಾಲಯ,14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!