Monday, March 27, 2023

Latest Posts

ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಭ್ರಷ್ಟಾಚಾರ ಮಾಡಿರುವ ಬಗ್ಗೆ ವರದಿ ಇದೆ: ಸಚಿವ ಈಶ್ವರಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಕಾಂಗ್ರೆಸ್​​ನವರು ಕರ್ನಾಟಕ ಬಂದ್​ಗೆ ಕರೆ ನೀಡಿದ್ದರು. ಬಳಿಕ ವಾಪಸ್​ ಪಡೆದಿದ್ದಾರೆ. ಹೀಗೆ ಭ್ರ​ಷ್ಟಾ​​​​​​​​​​ಚಾರಿಗಳೇ ಬಂದ್​​​ಗೆ ಕರೆ ನೀಡಿರುವುದು ಎಷ್ಟು ಸರಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾ. 9ರಂದು ರಾಜ್ಯ ಬಂದ್​​ಗೆ ಕರೆ ನೀಡಿದ್ದರು. ಬಂದ್​ಗೆ ಕರೆ ನೀಡಿದವರು ಭ್ರಷ್ಟಾಚಾರಿಗಳಾಗಿದ್ದು, ನಿಮಗೆ ಬಂದ್ ಕರೆ ನೀಡಲು ಯಾವುದೇ ನೈತಿಕತೆ ಇಲ್ಲ. ಸಿದ್ದರಾಮಯ್ಯ ಅವರು ಬೆಂಗಳೂರಿನ ಅರ್ಕಾವತಿ ಬಡಾವಣೆಯಲ್ಲಿ ಡಿನೋಟಿಫಿಕೇಷನ್ ನಲ್ಲಿ‌ 8 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ. ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರು ನೀಡಿದ ವರದಿಯಲ್ಲಿದೆ ಎಂದು ಆರೋಪಿಸಿದರು.

ಕಾಂಗ್ರೆಸ್​ನವರು ದೊಡ್ಡ ಭ್ರಷ್ಟಾಚಾರ ನಡೆಸಿದ್ದಾರೆ. ಸುಮ್ಮನೆ ಕೇಳುತ್ತೇನೆ. ಡಿ.ಕೆ. ಶಿವಕುಮಾರ್ ಮಗಳ ಹೆಸರಿನಲ್ಲಿನ 150 ಕೋಟಿ ರೂ. ಹೇಗೆ ಬಂತು ಎಂದು ಪ್ರಶ್ನಿಸಿದರು. ಭ್ರಷ್ಟಾಚಾರ ಎಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡಿದ್ದರಿಂದ ಮುನಿರತ್ನ ಅವರು ಕೋರ್ಟ್ ನಲ್ಲಿ ಕೇಸು ದಾಖಲಿಸಿದ್ದಾರೆ. ಕಾಂಗ್ರೆಸ್ ನವರು ಸುಳ್ಳು ಆರೋಪ ಮಾಡುತ್ತಿರುವುದರಿಂದ ಅವರು ಈ ಬಾರಿ ವಿರೋಧ ಪಕ್ಷದ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಈಶ್ವರಪ್ಪ ಭವಿಷ್ಯ ನುಡಿದರು.

ಬಿಜೆಪಿಯವರು ಕಾಂಗ್ರೆಸ್ ಸೇರುತ್ತಿರುವ ಕುರಿತು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಸಿದ್ದರಾಮಯ್ಯ ಪಕ್ಷಾಂತರ ಪ್ರವೀಣರು. ಮೊದಲು ಜೆಡಿಎಸ್ ನಲ್ಲಿದ್ದರು. ಈಗ ಕಾಂಗ್ರೆಸ್ ನಲ್ಲಿದ್ದಾರೆ ಎಂದರು.

ನೇತೃತ್ವ, ಸಂಘಟನೆ, ಅಭಿವೃದ್ದಿ ಭಾರತೀಯ ಸಂಸ್ಕೃತಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ. ಸಂಘಟನೆ, ಅಭಿವೃದ್ಧಿ ಹಾಗೂ ಭಾರತೀಯ ಸಂಸ್ಕೃತಿ ರಕ್ಷಣೆಯ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ ಎಂದು ಅವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!