ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ವಾಲ್ಮೀಕಿ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ನಡುವೆ ವಾಗ್ವಾದ ನಡೆದಿದ್ದು. ಈ ವೇಳೆ ಇಬ್ಬರೂ ಏಕವಚನದಲ್ಲಿ ವಾಕ್ಸಮರ ನಡೆಸಿದ್ದಾರೆ.
ಈ ಹಿಂದೆ ಅಧಿವೇಶನದಲ್ಲಿ ವಾಲ್ಮೀಕಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕತ್ವದ ನಡುವೆ ತೀವ್ರ ವಾಗ್ವಾದ ನಡೆದಿತ್ತು.
ಈ ವೇಳೆ ಮಧ್ಯ ಪ್ರವೇಶಿಸಿದ ಅಶ್ವಥ್ ನಾರಾಯಣ್ ಏರುಧ್ವನಿಯಲ್ಲಿ ವಾಗ್ದಾಳಿ ನಡೆಸಿದರು. ಪೇ ಸಿಎಂ, 100% ಸಿಎಂ ಅಂತ ಕೂಗಿದರು, ಇದಕ್ಕೆ ಗರಂ ಆದ ಸಿಎಂ, ನಿಮಗೆ ಮಾನ ಮಾರ್ಯಾದೆ ಇಲ್ಲ, ನಿಮ್ಮ ಹಗರಣಗಳನ್ನೆಲ್ಲ ಎಳೆಯುತ್ತೇನೆ ಎನ್ನುತ್ತಿದ್ದಂತೆ ʻಭ್ರಷ್ಟ ಮುಖ್ಯಮಂತ್ರಿʼ ಎಂದು ಅಶ್ವಥ್ ನಾರಾಯಣ್ ಕೂಗಾಡಿದ್ದಾರೆ.
ಇದರಿಂದ ಕೆರಳಿದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಅಶ್ವಥ್ ನಾರಾಯಣ ಅವರನ್ನು ಸದನದಿಂದ ಹೊರಗೆ ಹಾಕಿ ಎಂದು ಹೇಳಿದ್ದಾರೆ. ಈ ವೇಳೆ ಈ ಉಭಯ ನಾಯಕರ ನಡುವೆ ಜಟಾಪಟಿ ಏರ್ಪಟ್ಟಿದೆ.