ಕುರುಬರಿಗೂ ಮೋಸ ಮಾಡಿದ್ದ ಸಿದ್ದರಾಮಯ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೂರ್ತಿ ಪೂಜೆ ಹಾಗು ವ್ಯಕ್ತಿ ಪೂಜೆಯೇ ಇಲ್ಲದ ಇಸ್ಲಾಂ ಮತದಲ್ಲಿ ಮುಸಲ್ಮಾನರು ಟಿಪ್ಪು ಜಯಂತಿಯನ್ನು ಕೇಳಿರಲಿಲ್ಲ. ಆದರೆ ಸಿದ್ದರಾಮಯ್ಯ ಜಾತಿಗಳ ನಡುವೆ ಘರ್ಷಣೆ ಸೃಷ್ಟಿಸುವುದಕ್ಕೋಸ್ಕರ ಟಿಪ್ಪು ಜಯಂತಿಯನ್ನು ಪ್ರಾರಂಭಿಸಿದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.

ಅವರು ಸೋಮವಾರ,ಉಡುಪಿಯ ನಗರದ ಎಮ್.ಜಿ.ಎಮ್ ಮೈದಾನದಲ್ಲಿ ಜಿಲ್ಲಾ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಹೋರಾಟದಲ್ಲಿ ಮಡಿಕೇರಿಯ ಹಿಂದು ಕಾರ್ಯಕರ್ತ ಕುಟ್ಟಪ್ಪ ಹತ್ಯೆಯಾದರು. ಅನೇಕ ಅಮಾಯಕ ಹಿಂದು = ಯುವಕರ ಮೇಲೆ ಕೇಸುಗಳು ದಾಖಲಾಗಿ, ಇಂದಿಗೂ ಕೋರ್ಟಿಗೆ ಅಲೆದಾಡುತ್ತಿದ್ದಾರೆ ಎಂದವರು ಹೇಳಿದರು

ಕುರುಬರಿಗೂ ಮೋಸ

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಶಾಲಾ ಮಕ್ಕಳಿಗೆ ಪ್ರವಾಸ ಯೋಜನೆಯನ್ನು ಒಂದು ಜಾತಿಗೆ ಸೀಮಿತಗೊಳಿಸಿದರು. ಶಾದಿಭಾಗ್ಯ ಯೋಜನೆಯ ಮೂಲಕ ಮುಸಲ್ಮಾನರನ್ನು ಓಲೈಕೆ ಮಾಡಲು ಪ್ರಯತ್ನಿಸಿದರು. ಸ್ವತಃ ಕುರುಬರಾದ ಸಿದ್ದರಾಮಯ್ಯನವರು ಕುರುಬರಿಗೂ ಶಾಧಿಭಾಗ್ಯ ಯೋಜನೆಯನ್ನು ನೀಡದೇ ಮೋಸ ಮಾಡಿದ್ದಾರೆ ಎಂದರು.

ಈಗಲೇ ಬೆದರಿಸಲು ಆರಂಭ

ಈಗಾಗಲೇ ಕೆಲವರು ಮುಂದಿನ ಎರಡು ತಿಂಗಳ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ನಂತರ ಬಿಜೆಪಿಯವರನ್ನು ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಕಾರ್ಯಕರ್ತರು ಯೋಚನೆ ಮಾಡಬೇಕಿದೆ. ಬಿಜೆಪಿಯನ್ನು ಹೊರತು ಪಡಿಸಿ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಈ ದೇಶಕ್ಕೆ, ಹಿಂದುಗಳಿಗೆ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗೆಲ್ಲುವ ಅಂತರ ಮುಖ್ಯ

ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರವನ್ನು ಬಿಜೆಪಿ ಗೆಲ್ಲಲಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಅಂತರದಲ್ಲಿ ಗೆಲ್ಲುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಕ್ಕಿಂತಲೂ ಅತೀ ಹೆಚ್ಚಿನ ಅಂತರದಲ್ಲಿ ಐದು ಕ್ಷೇತ್ರವನ್ನು ಗೆಲ್ಲಿಸುವ ಜವಾಬ್ದಾರಿ, ನಾಯಕರು ಮತ್ತು ಕಾರ್ಯಕರ್ತರ ಮೇಲಿದೆ ಎಂದರು

ಕಾರ್ಯಕರ್ತರೇ ಯೋಧರು

ನಮ್ಮ ಪಕ್ಷಕ್ಕೆ ನಾವೇ ಯೋಧರು, ಗಡಿಯಲ್ಲಿ ಕಾಯುವ ಯೋಧ ಮೈನಸ್ ಡಿಗ್ರಿ ಸೆಲ್ಸಿಯಸ್ ನಲ್ಲಿ ದೇಶಕ್ಕಾಗಿ ಹೋರಾಡುತ್ತಾರೆ. ಅವರಿಗೂ ನರೇಂದ್ರ ಮೋದಿಯವರು ನಾಯಕತ್ವದಲ್ಲಿ ವಿಶ್ವಾಸವಿದೆ. ಬಿಜೆಪಿ ಯೋಧರು ಪಕ್ಷವನ್ನು ಗೆಲ್ಲಿಸಲು ಪಣತೊಡಬೇಕು ಎಂದು ಕರೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!