ಸಿಎಂ ಗಾದಿಗೆ ಜಟಾಪಟಿ: ದೆಹಲಿಯಲ್ಲಿ ಬೀಡು ಬಿಟ್ಟ ʻಕೈʼ ನಾಯಕರು, ಮಹತ್ವದ ಮಾತುಕತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಪಷ್ಟ ಜನಾದೇಶದ ಹೊರತಾಗಿಯೂ, ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಸಸ್ಪೆನ್ಸ್ ಮುಂದುವರೆದಿದೆ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ಹುದ್ದೆಗೆ ಇಬ್ಬರು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ, ಸಿಎಂ ಘೋಷಣೆಗೆ ಮುಂಚಿತವಾಗಿ ಮಂಗಳವಾರ ದೆಹಲಿಗೆ ಬಂದಿಳಿದಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೋಮವಾರವೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು. ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಶಿವಕುಮಾರ್ ಹೊಟ್ಟೆಯ ಇನ್ಫೆಕ್ಷನ್ ಕಾರಣಕ್ಕೆ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದರು. ಇದೀಗ ಇಬ್ಬರು ನಾಯಕರ ಸಮ್ಮುಖದಲ್ಲಿ ಸಿಎಂ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ.

ಪಕ್ಷದ ಮೂಲಗಳ ಪ್ರಕಾರ ಖರ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸುವ ಮೊದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸಮಾಲೋಚಿಸುತ್ತಾರೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಮುಂದಿನ ಸಿಎಂ ಹೆಸರನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!