ಇಂದು ವರುಣಾದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಪರಿಶೀಲನೆ ಪ್ರಕ್ರಿಯೆ ಮುಕ್ತಾಯವಾಗಿದೆ.

ಈ ಮಧ್ಯೆ ಎಲ್ಲಾ ಪಕ್ಷಗಳ ನಾಯಕರ ಭರ್ಜರಿ ಪ್ರಚಾರ ಆರಂಭವಾಗಿದ್ದು, ಇಂದು ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಸಾಲು ಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬಿಡುವಿಲ್ಲದ ಪ್ರಚಾರ ನಡೆಸಲಿದ್ದಾರೆ.

ಬೆಳಗ್ಗೆ 10:30 ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಸಿದ್ದರಾಮಯ್ಯ ಆಗಮಿಸಲಿದ್ದು, 11 ಗಂಟೆಯಿಂದ ಮತಯಾಚನೆ ಆರಂಭವಾಗಲಿದೆ. ರಾತ್ರಿ 7 ಗಂಟೆವರೆಗೂ ಪ್ರಚಾರ ಮುಂದುವರಿಯಲಿದ್ದು, ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!