ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳನ್ನು ಗೆಲ್ಲಬೇಕು ಎಂದು ಗುರಿ ಇಟ್ಟುಕೊಂಡಿದ್ದೇವೆ. 130ಕ್ಕೂ ಅಧಿಕ ಸ್ಥಾನ ಗೆಲ್ಲುವುದು ಖಚಿತ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.
ಮಾದರಿ ಸಮೀಕ್ಷೆ ಎಂದರೆ ಜನರ ಅಭಿಪ್ರಾಯವನ್ನು ಖುದ್ದಾಗಿ ಸಂಗ್ರಹಿಸಲಾಗುತ್ತದೆ. ಮುಖ್ಯಮಂತ್ರಿಗಳು ಜನರ ಅಭಿಪ್ರಾಯ ಒಪ್ಪಿಕೊಳ್ಳಲ್ಲ ಎಂದಾಯಿತು. ಅದೇನೇ ಇದ್ದರೂ ನಾವು ಸ್ಪಷ್ಟ ಬಹುಮತದ ಮೂಲಕ ಗೆಲ್ಲುವುದನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.