ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯ ಹತಾಶರಾಗಿದ್ದಾರೆ: ಸಚಿವ ಕಾರಜೋಳ

ಹೊಸದಿಗಂತ ವರದಿ, ವಿಜಯಪುರ:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಅನಂತಕುಮಾರ ಹೆಗ್ಡೆ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರಧಾನಿ ಮೋದಿ ಕುಮ್ಮುಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಇಡೀ ಪ್ರಪಂಚ ನರೇಂದ್ರ ಮೋದಿಯವರ ನಾಯಕತ್ವ ಬೆಂಬಲ ಮಾಡುವಾಗ, ಪ್ರೀತಿಸುವಾಗ
ಈ ರೀತಿ ಹೇಳಿಕೆ ರಾಜಕೀಯ ಪ್ರೇರಿತ. ಆ ಹೇಳಿಕೆಗೆ ಯಾವುದೇ ಅರ್ಥ, ತೂಕ ಇರುವುದಿಲ್ಲ ಎಂದರು.
ಸಿದ್ದರಾಮಯ್ಯ ಬುಲ್ಡೋಜರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಈ ದೇಶದ ಸಂಸ್ಕೃತಿ, ಪ್ರಾಚೀನ ಕಾಲದಿಂದಲೂ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬದುಕುವಂತಾಗಿದೆ. ಅಲ್ಲದೆ ಶರಣರು, ಸಂತರು ನಮಗಾಗಿ ಸಂದೇಶ ಬಿಟ್ಟು ಹೋಗಿದ್ದಾರೆ. ಬಸವಣ್ಣನವರು ದಯವಿಲ್ಲದ ಧರ್ಮ ಯಾವುದಿದೆ ಅಂತ ಹೇಳಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!