ಹೊಸದಿಗಂತ ವರದಿ, ಬಾಗಲಕೋಟೆ:
ಆರ್ ಎಸ್ ಎಸ್ & ಚಡ್ಡಿ ಕುರಿತು ಮಾತನಾಡಿ ಮಾಜಿ ಸಿಎಂ ಸಿದ್ದರಾಮಯ್ಯನವರ ಗೌರವ ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಗೌರವಯುತವಾಗಿ ನಡೆದುಕೊಳ್ತಾರೆ ಎನ್ನುವ ನಿರೀಕ್ಷೆ ಇತ್ತು. ಆರ್ ಆರ್ ಎಸ್ ಮತ್ತು ಚಡ್ಡಿ ಬಗ್ಗೆ ಮಾತನಾಡಿದ್ರೆ ಸಿದ್ದುಗೆ ಇರುವ ಗೌರವ ಸಹ ಹಾಳಾಗುತ್ತೆ ಎಂದು ಹೇಳಿದರು. ಪಠ್ಯ ಪರಿಷ್ಕರಣೆ ವಿವಾದದ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಎಲ್ಲ ಸರಿಪಡಿಸುತ್ತೇವೆಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಪಠ್ಯ ಪರಿಷ್ಕರಣೆಯನ್ನ ದೊಡ್ಡ ಗೊಂದಲ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಸಿದ್ದು & ಯಡಿಯೂರಪ್ಪ ಮುಖಾಮುಖಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಅನಿರೀಕ್ಷಿತ ಭೇಟಿಯದು, ಸಿದ್ದರಾಮಯ್ಯ ಹೊರಟಿದ್ದರು, ನಾನು ಸಹ ಹೊರಟಿದ್ದೆ. ನಾನು ಕೂತಿದ್ದೆಡೆ ಬಂದರು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ.. ನಾವು ಕಟ್ಟಾ ವಿರೋಧಿಗಳಲ್ಲವೆ ಎಂದು ಹೇಳಿದರು. ನಾನು ಎಲ್ಲರ ಜೊತೆ ಸ್ನೇಹ ವಿಶ್ವಾಸ ಇಟ್ಟುಕೊಂಡಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ