ಪಿಎಫ್ಐ, ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು

ದಿಗಂತ ವರದಿ ವಿಜಯಪುರ:

ಪಿಎಫ್’ಐ, ಎಸ್’ಡಿಪಿಐ ಬೆಳೆಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯರಿಂದಲೇ‌ ಪರಿಸ್ಥಿತಿ ಗಂಭೀರವಾಗಿದೆ.
ರಾಜ್ಯದಲ್ಲಿ ಪಿಎಫ್’ಐ, ಎಸ್’ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ ಎಂದರು. ಸಿದ್ದರಾಮಯ್ಯ ಅವಧಿಯಲ್ಲಿ ದೇಶ ವಿರೋಧಿ ಸಂಘಟನೆ ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್’ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಇನ್ನು ಪಿಎಫ್’ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹಿಸಿ
ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ರಾಜ್ಯದಲ್ಲಿ ಯಾರಾದರು ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ದೂರಿದರು.

ಪೇಮೆಂಟ್ ಮಾಡಿ ಸಿದ್ದು ಸಿಎಂ ಆಗಿದ್ದಾರೆ. ಮೇಡಂ (ಸೋನಿಯಾಗಾಂಧಿ)ಗೆ ಪೇಮೆಂಟ್ ಮಾಡಿ ಸಿದ್ದರಾಮಯ್ಯ ಸಿಎಂ ಆಗಿರೋದು. ಖರ್ಗೆ, ಪರಮೇಶ್ವರ ಸಿನಿಯರ್, ಡಿಕೆಶಿ, ದೇಶಪಾಂಡೆಯಂತ ಲೀಡರ್ ನಡುವೆ ಸಿಎಂ ಆಗಿದ್ದು ಪೇಮೆಂಟ್ ಮಾಡಿಯೇ ಎಂದು ವಾಗ್ದಾಳಿ ಮಾಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!