ಹೊಸದಿಗಂತ ವರದಿ,ಮೈಸೂರು:
ರಾಜ್ಯದಲ್ಲಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಈಗಿನ ವಿಪಕ್ಷ ನಾಯಕ ಸಿದ್ಧರಾಮಯ್ಯ ಅತಿ ಹೆಚ್ಚು ಸಾಲ ಮಾಡಿದ್ದಾರೆ. ಈ ಸಾಧನೆ ಮಾಡಿದ ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ವ್ಯಂಗ್ಯವಾಡಿದರು.
ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವರು ಮಂದಿ ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿ ಹೋಗಿದ್ದಾರೆ. ಅರ್ಯಾರು ತಮ್ಮ ಆಡಳಿತದ ಅವಧಿಯಲ್ಲಿ ಸಿದ್ದರಾಮಯ್ಯನವರಷ್ಟು ಸಾಲ ಮಾಡಲಿಲ್ಲ. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅತಿ ಹೆಚ್ಚು ಸಾಲ ಮಾಡಿದ್ದಾರೆ. ಯಾರ ಮಾಡದಷ್ಟು ಸಾಲವನ್ನು ಮಾಡಿದ್ದಾರೆ. ರಾಜ್ಯದ ಬಜೆಟ್ನಷ್ಟೆ ಸಾಲ ಮಾಡಿದ್ದಾರೆ. ಹಾಗಾಗಿ ಹೆಚ್ಚು ಸಾಲ ಮಾಡಿ ದಾಖಲೆ ಬರೆದಿರುವ ಸಿದ್ದರಾಮಮಯ್ಯಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಲಿ ಎಂದು ಲೇವಡಿ ಮಾಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ