ಎಲ್ಲದಕ್ಕೂ ಆರೆಸ್ಸೆಸ್ ಹೆಸರೇಳುವುದು ಸಿದ್ದರಾಮಯ್ಯ, ಶಿವಕುಮಾರ್‌ಗೆ ಖಯಾಲಿಯಾಗಿದೆ: ಜಗದೀಶ ಶೆಟ್ಟರ್‌ ವಾಗ್ದಾಳಿ

ಹೊಸದಿಗಂತ ವರದಿ, ಹುಬ್ಬಳ್ಳಿ
ಸಂಘ ಪರಿವಾರದ ಹೆಸರು ತೆಗೆದುಕೊಳ್ಳದಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರಿಗೆ ತಿಂದಿದ್ದು ಅರಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಪದೆ ಪದೇ ಸಂಘ ಪರಿವಾರ ಹೆಸರು ಹೇಳೋದು ಖಯಾಲಿ ಆಗಿಬಿಟ್ಟಿದೆ. ರಾಜ್ಯದಲ್ಲಿ ಆಗುತ್ತಿರುವ ಪ್ರತಿಯೊಂದು ಸಮಸ್ಯೆಗೆ ಸಂಘ ಪರಿವಾರವನ್ನೇ ಗುರಿ ಮಾಡುತ್ತಾರೆ. ಇದನ್ನು ಕಾಂಗ್ರೆಸ್ ನಿಲ್ಲಿಸಬೇಕು ಎಂದರು.
ಸರ್ಕಾರದ ಅಥವಾ ಮುಖ್ಯಮಂತ್ರಿ ಬಗ್ಗೆಯಾಗಲಿ ಏನಾದರೂ ಮಾತನಾಡೋದಿದ್ದರೆ ಮಾತನಾಡಲಿ. ಅದನ್ನು ಬಿಟ್ಟು ಸಂಘ ಪರಿವಾರದ ವಿರುದ್ಧ ಅನಗತ್ಯ ಟೀಕೆ ಮಾಡೋದು ಸರಿಯಲ್ಲ. ವಿರೋಧ ಪಕ್ಷದ ವೈಫಲ್ಯತೆ ಮುಚ್ಚಿಕೊಳ್ಳಲು ಇವತ್ತು ಸಂಘದ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಹರಿಹಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!