ಹೊಸದಿಗಂತ ವರದಿ ಶಿವಮೊಗ್ಗ:
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ 3ನೇ ಅಭ್ಯರ್ಥಿ ಲೇಹರ್ಸಿಂಗ್ ಗೆಲ್ಲುವಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯನವರ ಪಾತ್ರ ಅತೀ ಮುಖ್ಯವಾಗಿತ್ತು. ಹೀಗಾಗಿ ಅವರಿಗೆ ಹಾಗೂ ಗೆದ್ದಿರುವ ಪಕ್ಷದ ಮೂವರಿಗೂ ಅಭಿನಂದಿಸುವುದಾಗಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ತಂತ್ರಗಾರಿಕೆ ಬಿಜೆಪಿಗೆ ಸಹಾಯ ಮಾಡಿದೆ. ಕಾಂಗ್ರೆಸ್ ನ ಮುಸ್ಲಿಂ ಅಭ್ಯರ್ಥಿ ಮತ್ತು ಜೆಡಿಎಸ್ ಅಭ್ಯರ್ಥಿ ಸೋಲಲು ಸಿದ್ದರಾಮಯ್ಯ ನೇರ ಕಾರಣರಾಗಿರುವುದು ಅವರ ತಂತ್ರಗಾರಿಕೆಯಿಂದಲೇ ಬಹಿರಂಗವಾಗಿದೆ ಎಂದರು.
ಕಾಂಗ್ರೆಸ್ನ ಮುಸ್ಲಿಂ ಅಭ್ಯರ್ಥಿ ಮನ್ಸೂರ್ ಅವರ ಸೋಲಿಗೆ ಕಾರಣರಾಗಿರುವ ಸಿದ್ದರಾಮಯ್ಯ ಮುಸ್ಲಿಂ ಸಮುದಾಯಕ್ಕೆ ದ್ರೋಹ ಬಗೆದಿರುವುದನ್ನು ಆ ಸಮುದಾಯ ಅರ್ಥ ಮಾಡಿಕೊಳ್ಳಬೇಕಿದೆ. ಬಿಜೆಪಿ ಕೋಮುವಾದಿ ಎಂದು ಬಿಂಬಿಸುವ ಸಿದ್ದರಾಮಯ್ಯನವರ ಬಣ್ಣ ಈಗ ಬಯಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ದ್ವಂದ್ವ ನಿಲುವು ಅವರದ್ದೇ ಜಾತ್ಯಾತೀತ ಶಕ್ತಿಗೆ ಸೋಲಾಗುವಂತಾಗಿದೆ ಎಂದು ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ