ಹೊಸದಿಗಂತ ವರದಿ ಬಾಗಲಕೋಟೆ:
ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದ ವೇಳೆ ಸರ್ಕಾರ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕ, ಬಾದಾಮಿ ವಿಧಾನಸಭೆ ಕ್ಷೇತ್ರದ ಪಟ್ಟದಕಲ್ಲು ನಿವಾಸಿ ಸಿದ್ದರಾಮಯ್ಯ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ವೈಯಕ್ತಿಕ ಪರಿಹಾರವಾಗಿ ಎರಡು ಲಕ್ಷ ರೂಪಾಯಿ ನೀಡಿದರು. ಶಾಸಕ ಆನಂದ ನ್ಯಾಮಗೌಡ,ಆಪ್ತ ಹೊಳಬಸು ಶೆಟ್ಟರ ಈ ಸಂದರ್ಭದಲ್ಲಿ ಹಾಜರಿದ್ದರು.