ಸಿದ್ಧರಾಮಯ್ಯ ವಿರುದ್ಧ ಸೋಮಣ್ಣ, ಡಿ.ಕೆ. ಶಿವಕುಮಾರ್‌ ವಿರುದ್ಧ ಆರ್‌.ಅಶೋಕ್‌ ಕಣಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಒಟ್ಟು 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಚ್ಚರಿ ಎನ್ನುವಂತೆ ಬಿಜೆಪಿ ಇಬ್ಬರು ಹಿರಿಯ ನಾಯಕರಾದ ವಿ. ಸೋಮಣ್ಣ ಹಾಗೂ ಆರ್‌.ಅಶೋಕ್‌ ಅವರಿಗೆ ಕಾಂಗ್ರೆಸ್‌ ಕಲಿಗಳ ವಿರುದ್ಧ ಹೋರಾಡುವ ಜವಾಬ್ದಾರಿ ನೀಡಲಾಗಿದೆ.

ವಿ. ಸೋಮಣ್ಣ ಅವರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಕ್ಷೇತ್ರವಾಗಿರುವ ವರುಣಾದಲ್ಲಿಯೂ ಸ್ಪರ್ಧೆ ಮಾಡುವಂತೆ ಸೂಚಿಸಲಾಗಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ವಿರುದ್ಧ ಸ್ಪರ್ಧೆ ಮಾಡುವಂತೆ ಕಂದಾಯ ಸಚಿವ ಆರ್‌.ಅಶೋಕ್‌ ಅವರಿಗೆ ಸೂಚಿಸಲಾಗಿದೆ. ಅದರೊಂದಿಗೆ ಅವರು ಪದ್ಮನಾಭನಗರ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!