ಸಿದ್ಧರಾಮಯ್ಯನವರು ಕಾಂಗ್ರೆಸ್ ಪಕ್ಷದ ಕೊನೆ ಮುಖ್ಯಮಂತ್ರಿ: ಕಾರಜೋಳ ವ್ಯಂಗ್ಯ

ಹೊಸ ದಿಗಂತ ವರದಿ, ಬೀದರ್:

ಕಾಂಗ್ರೆಸ್ ಪಕ್ಷದಿಂದ ರಾಜ್ಯದಲ್ಲಿ ಸಿದ್ದರಾಮಯ್ಯನವರೇ ಕೊನೆ ಮುಖ್ಯಮಂತ್ರಿ. ಎಂದು ಚಿತ್ರದುರ್ಗದ ಸಂಸದರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ವಿಜಯನಗರ ಸಾಮ್ರಾಜ್ಯದ ಕೊನೆಯ ಅರಸ ಅಳಿಯ ರಾಮರಾಯ ಆಗಿದ್ದರು. ಅದೇ ತರಹ ಸಿದ್ದರಾಮಯ್ಯನವರೇ ಕಡೆಯ  ಕಾಂಗ್ರೆಸ್ಸಿನ ಸಿಎಂ ಎಂದು ಕುಟುಕಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ ಕುರ್ಚಿಗಾಗಿ ನಡೆಸುತ್ತಿರುವ ಕಾದಾಟದಲ್ಲಿ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ ಅವರು ಎರಡು ವರ್ಷಗಳಿಂದ ಪ್ರಯತ್ನಿಸುತ್ತಿದ್ದಾರೆ. ಅವರು ಸಿಎಂ ಆಗಬಾರದು ಎಂದು ಸಿದ್ದರಾಮಯ್ಯನವರ ಬೆಂಬಲಿಗರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಇವರಿಬ್ಬರ ಜಗಳದಲ್ಲಿ ಆಡಳಿತ ಕುಸಿದು ಹೋಗಿದೆ ಎಂದು ಆರೋಪಿಸಿದರು.

ಡಿ.ಕೆ. ಶಿವಕುಮಾರ ಅವರಿಗೆ ಜ್ಯೋತಿಷ ಕೇಳುವುದು ಹವ್ಯಾಸ ಆಗಿದೆ. ಅದನ್ನು ನಂಬಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಭಾವಿಸಿದ್ದಾರೆ. ಆದರೆ, ಅವರು ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್‍ನವರುಡಿ.ಕೆ ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದವರು ಹೇಳಿದರು.

ರಾಜ್ಯ ಬಿಜೆಪಿಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಕೆಲವೇ ದಿನಗಳಲ್ಲಿ ಪಕ್ಷದಲ್ಲಿನ ಎಲ್ಲ ಸಮಸ್ಯೆ ಬಗೆಹರಿಯಲಿವೆ. ಮೂರು ರಾಜ್ಯಗಳ ಚುನಾವಣೆ ಇದ್ದದ್ದರಿಂದ ರಾಷ್ಟ್ರೀಯ ನಾಯಕರಿಗೆ ಕರ್ನಾಟಕದಲ್ಲಿನ ಗೊಂದಲ ನಿವಾರಿಸಲು ಕಾಲಾವಕಾಶ ಸಿಕ್ಕಿರಲಿಲ್ಲ. ಈಗ ಚುನಾವಣೆಗಳು ಮುಗಿದಿವೆ. ಎಲ್ಲ ರೀತಿಯ ಗೊಂದಲಗಳನ್ನು ನಿವಾರಿಸುತ್ತಾರೆ. ಪುನಃ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕಾರಜೋಳ ಹೇಳಿದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯ ಸರ್ಕಾರ ಮತ್ತೆ ಈ ವರ್ಷದ ಬಜೆಟ್‍ನಲ್ಲೂ ಸಹ ಪರಿಶಿಷ್ಟರ ಪಾಲಿನ ಎಸ್.ಈ.ಪಿ, ಟಿ.ಎಸ್.ಪಿ ಹಣ ಬಳಿಕೆ ಮಾಡಿದೆ. ಇದು ದುರದೃಷ್ಟಕರ. ಹಾಗಾಗಿ ಬಿಜೆಪಿ ವಿದನ ಸೌಧದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುತ್ತಿದೆ. ಬೀದರ್‍ನಲ್ಲಿ ಮಂಗಳವಾರ ಸರ್ಕರದ ವಿರೂದ್ಧ ಹೋರಾಟ ಕೈಗೊಂಡು ಯಾವುದೇ ಕಾರಣಕ್ಕೂ ಎಸ್.ಈ.ಪಿ ಹಾಗೂ ಟಿ.ಎಸ್.ಪಿ ಹಣ ಅನ್ಯ ಕಾರ್ಯಗಳಿಗೆ ಬಳಿಸದಂತೆ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಲಾಗಿದೆ ಎಂದರು.

ಪಕ್ಷದ ರಾಜ್ಯ ಕಾರ್ಯದರ್ಶಿಯೂ ಆದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶ ಪೀರಪ್ಪ ಔರಾದೆ, ಮುಖಂಡರಾದ ಗುರುನಾಥ ಜ್ಯಾಂತಿಕರ್, ಗುಂಡಪ್ಪ ವಕೀಲ, ಬಸವರಾಜ ಆರ್ಯ, ಈಶ್ವರಸಿಂಗ್ ಠಾಕೂರ್, ಫನಾರ್ಂಡಿಸ್ ಹಿಪ್ಪಳಗಾಂವ್, ಸುಧೀರ್ ಪತ್ರಿಕಾಗೋಷ್ಟಿಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!