ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾದಾಮಿ ಜನರಿಗೆ ಕೈ ಕೊಟ್ಟು ಹೋದ ಸಿದ್ದರಾಮಯ್ಯಗೆ ವರುಣಾದಲ್ಲಿ ಸೋಲು ಖಚಿತ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರ ವ್ಯಾಪ್ತಿಯ ಕೆರೂರಿನಲ್ಲಿ ಚುನಾವಣಾ ಪ್ರಚಾರದಲ್ಲಿಮಾತನಾಡಿದ ಅವರು ,ಸಿದ್ದರಾಮಯ್ಯ
ಬಾದಾಮಿಯಲ್ಲಿ ನಿಂತಿದ್ದರೆ ಸೋಲುತ್ತಿದ್ದರು.ಇದೀಗ ವರುಣಾದಲ್ಲಿಯೂ ಸೋಲುವುದು ಖಚಿತ. ಸಿದ್ದರಾಮಯ್ಯ ಪರಿಸ್ಥಿತಿ ಅತಂತ್ರವಾಗಿದೆ ಎಂದರು.
ಬಿ. ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯವರು ಮೋಸ ಮಾಡಿದರು, ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದರು ಎಂದೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಸ್ವತಃ ರಾಜೀನಾಮೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು.